ಪುತ್ತೂರು: ಪ್ರತಿಷ್ಠಿತ ಐಎಮ್ಎ-ಕೆಎಸ್ಬಿ ಡಾಕ್ಟರ್ಸ್ ಡೇ ಪ್ರಶಸ್ತಿ ಪುರಸ್ಕೃತರಾಗಿರುವ ಜನಪ್ರಿಯ ವೈದ್ಯ ಡಾ.ಎಮ್.ಕೆ.ಪ್ರಸಾದ್ ಅವರಿಗೆ ಅಭಿವಂದನಾ ನಾಗರಿಕ ಸನ್ಮಾನ ಕಾರ್ಯಕ್ರಮವು ಡಾ.ಎಮ್.ಕೆ.ಪ್ರಸಾದ್ ಅಭಿವಂದನಾ ವೇದಿಕೆ ವತಿಯಿಂದ ಜು.14ರಂದು ಸಂಜೆ 5 ಗಂಟೆಗೆ ಸಾಲ್ಮರ ಕೊಟೇಚಾ ಹಾಲ್ನಲ್ಲಿ ನಡೆಯಲಿದೆ.
`ಮುತ್ತಿನ ನಗರಿಯ ಹಿಂದೂ ಹೃದಯ ಸಾಮ್ರಾಟ್ ಡಾ.ಎಮ್.ಕೆ.ಪ್ರಸಾದ್ ಅಭಿವಂದನಾ ನಾಗರಿಕ ಸನ್ಮಾನ’ ಎಂಬ ಹೆಸರಿನಲ್ಲಿ ಕಾರ್ಯಕ್ರಮ ನಡೆಯಲಿದೆ.ಸಂಜೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸಾಲ್ಮರ ಜಂಕ್ಷನ್ನಿಂದ ಡಾ.ಎಂ.ಕೆ.ಪ್ರಸಾದ್ ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು.ಬಳಿಕ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಅಭಿವಂದನಾ ವೇದಿಕೆ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ.ಬ್ರಹ್ಮಶ್ರೀ ವೇ.ಮೂ.ಕುಂಟಾರು ರವೀಶ ತಂತ್ರಿ ಅಭಿವಂದನಾ ಮಾತುಗಳನ್ನಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಶಾಸಕ ಸಂಜೀವ ಮಠಂದೂರು ಪಾಲ್ಗೊಳ್ಳುವರು.ಈ ಸಂದರ್ಭದಲ್ಲಿ ಹಿಂಜಾವೇ ಕರ್ನಾಟಕ ಪ್ರಾಂತ ಪ್ರಶಿಕ್ಷಣ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ, ವಿಹಿಂಪ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ|ಎಂ.ಬಿ.ಪುರಾಣಿಕ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್, ಹಿರಿಯ ವೈದ್ಯೆ ಡಾ.ಗೌರಿ ಪೈ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಜೆ.ಕೊಟೇಚಾ ಉಪಸ್ಥಿತರಿರುವರು.ಡಾ.ಎಂ.ಕೆ.ಪ್ರಸಾದ್ ಅವರಿಗೆ ಹಾರಾರ್ಪಣೆ, ಸನ್ಮಾನಿಸಲು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೂ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಡಾ.ಎಂ.ಕೆ.ಪ್ರಸಾದ್ ಅವರ ಅಭಿವಂದನಾ ನಾಗರಿಕ ಸನ್ಮಾನ ಕಾರ್ಯಕ್ರಮವು ಸುದ್ದಿ ಪುತ್ತೂರು ಯು ಟ್ಯೂಬ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ.ಮರು ಪ್ರಸಾರವನ್ನು ಸುದ್ದಿ ಕೇಬಲ್ ಚಾನೆಲ್(ನಂ.93)ನಲ್ಲಿ ವೀಕ್ಷಿಸಬಹುದು.