ಗ್ರಾ.ಪಂ. ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕೆ ಸಿಎಂಗೆ ಮನವಿ

0

ನೆಲ್ಯಾಡಿ: ಗ್ರಾಮ ಪಂಚಾಯತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನದ ಜೊತೆಗೆ ಸೂಕ್ತ ಸವಲತ್ತುಗಳನ್ನು ಒದಗಿಸುವಂತೆ ಜು.12ರಂದು ಉಪ್ಪಿನಂಗಡಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್.ಡಿ.ಪಿ.ಆರ್ ಕಡಬ ತಾಲೂಕು ಸಮಿತಿಯಿಂದ ಮನವಿ ಮಾಡಲಾಗಿದೆ.

ಸಮಿತಿ ಅಧ್ಯಕ್ಷೆ ಪುಷ್ಪ ಜಯಂತ್ ಕೆ. ಸುವರ್ಣ ಗೋಳಿತ್ತೊಟ್ಟು, ಪದಾಧಿಕಾರಿಗಳಾದ ಗಿರೀಶ್ ನೆಲ್ಯಾಡಿ, ಸೋಮಣ್ಣ ನೆಲ್ಯಾಡಿ, ದಿನೇಶ್ ಪಿ.ಎಮ್. ಗೊಳಿತ್ತೊಟ್ಟು ಹಾಗೂ ರಕ್ಷಿತ್ ಉಪ್ಪಿನಂಗಡಿಯವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಶ್ರೇಯೋಭಿವೃದ್ಧಿ ಸಂಘಟನೆಯ ಮನವಿಯನ್ನು ಪರಿಶೀಲನೆ ಮಾಡಿದ ಮುಖ್ಯಮಂತ್ರಿಗಳು ನೌಕರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಮಿತಿ ಅಧ್ಯಕ್ಷೆ ಪುಷ್ಪ ಜಯಂತ್ ಕೆ.ಸುವರ್ಣರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here