ಪುತ್ತೂರು: ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ಡಿಪಿಐ ಪಕ್ಷದ ವತಿಯಿಂದ ತುರ್ತು ಕಾರ್ಯಾಚರಣೆಗೆ ಜಿಲ್ಲೆಯಾದ್ಯಂತ ರೆಸ್ಕ್ಯೂ ತಂಡವನ್ನು ರಚಿಸಲಾಗಿದೆ. ಈ ಕುರಿತು ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತಹಶಿಲ್ದಾರರನ್ನು ಭೇಟಿಯಾಗಿ ಪ್ರಕೃತಿ ವಿಕೋಪಗಳು ಎದುರಾದರೆ ಪರಿಹಾರ ಕಾರ್ಯಾಚರಣೆಗೆ ರೆಸ್ಕ್ಯೂ ತಂಡ ಸನ್ನದ್ದವಾಗಿದ್ದು ಸಾರ್ವಜನಿಕರು ಮತ್ತು ಇಲಾಖೆಗಳು ಸಂಪರ್ಕಿಸಬಹುದು ಎಂಬ ಮಾಹಿತಿಯನ್ನು ನೀಡಲಾಯಿತು. ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಸಂಘಟನಾ ಕಾರ್ಯದರ್ಶಿ ಅಶ್ರ- ಬಾವು, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಗೂ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಉಪಸ್ಥಿತರಿದ್ದರು.