ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕ ಕಾಲೋನಿಯಲ್ಲಿ ಜುಲೈ 14ರಂದು ಮಧ್ಯಾಹ್ನ ಬೀಸಿದ ಭಾರೀ ಗಾಳಿ ಮತ್ತು ಮಳೆಗೆ ಮನೆಯೊಂದರ ಶೀಟ್ ಹಾರಿ ನೆಲಕ್ಕೆ ಅಪ್ಪಳಿಸಿ ಬಿದ್ದು ಹಾನಿ ಉಂಟಾಗಿದೆ. ಪೆರಿಯಡ್ಕ ನಿವಾಸಿ ಖಾಸಿಂ ಎಂಬವರ ಮನೆಯ ಮೇಲಿನ ಸಿಮೆಂಟ್ ಶೀಟ್ ಗಾಳಿಗೆ ಹಾರಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದು, ಮನೆಯೊಳಗಿನ ವಸ್ತುಗಳು ತುಂಡಾಗಿ ಬಿದ್ದಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದರುವುದಾಗಿ ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮಕರಣಿಕರಾದ ಜಿತೇಶ್ ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.