ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಪ್ರಾಥಮಿಕ, ಪ್ರೌಢ ಶಾಲಾ ವಿಭಾಗದ ಚದುರಂಗ ಸ್ಪರ್ಧೆ

0

ಕಾಣಿಯೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಸವಣೂರು, ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇದರ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಚದುರಂಗ ಸ್ಪರ್ಧೆಯು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟಿಫನ್ ವೇಗಸ್, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಕರ ಸಂಘದ ಅಧ್ಯಕ್ಷ ಮೋನಪ್ಪ ಪಟ್ಟೆ, ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದರವರು ಶುಭಹಾರೈಸಿದರು.

ಬೆಳಂದೂರು ಗ್ರಾ.ಪಂ.ಸದಸ್ಯ ಜಯಂತ ಅಬೀರ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬಾಲಕೃಷ್ಣ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ ರೈ, ಪ್ರಗತಿ ವಿದ್ಯಾಸಂಸ್ಥೆಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಮುಖ್ಯಗುರು ಸರಸ್ವತಿ, ಹಿರಿಯ ಶಿಕ್ಷಕಿಯರಾದ ಹೇಮಾನಾಗೇಶ್ ರೈ, ಅನಿತಾ ಜೆ ರೈ, ರಾಷ್ಟ್ರೀಯ ಚೆಸ್ ಪ್ರತಿಭೆ, ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಶಾಲ್ಮಿಕಾ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಈಶಿಕಾ ಪ್ರಾರ್ಥಿಸಿದರು. ಶಿಕ್ಷಕಿ ವಿನಯ ವಿ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು. ತೀರ್ಪಗಾರರು, ತಂಡದ ಮೇಲ್ವೀಚಾರಕರು, ಸ್ಪರ್ಧಾಳುಗಳು, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್, ವನಿತಾ, ಜಯಚಂದ್ರ, ಶರತ್ ಸಹಕರಿಸಿದರು.

LEAVE A REPLY

Please enter your comment!
Please enter your name here