ನೆಲ್ಯಾಡಿ: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ಬಳಿಯ ನಿವಾಸಿ, ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರೆಯಾಗಿದ್ದ ಮೇರಿ (ಆನ್ಸಿ)ಪಿ.ಎಂ.(47ವ.)ರವರು ಜು.16ರಂದು ಬೆಳಿಗ್ಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೇರಿಯವರು ಕಳೆದ 12 ವರ್ಷಗಳಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರೆಯಾಗಿ ಕೆಲಸ ಮಾಡಿಕೊಂಡಿದ್ದರು. ಸೇವೆ ಖಾಯಮಾತಿಗೆ ಸಂಬಂಧಿಸಿದಂತೆ ಪ್ರಯತ್ನಿಸುತ್ತಿದ್ದರು. ಇದೇ ನೋವಿನಲ್ಲಿದ್ದ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಜು.16ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತಿ ಪ್ರಕಾಶ್ ಕೆ.ಜೆ.ಕೆ, ಪುತ್ರಿ ಸಾನಿಯಾ ಪ್ರಕಾಶ್ ಹಾಗೂ ಪುತ್ರ ಸೂರ್ಯಪ್ರಕಾಶ್ರವರನ್ನು ಅಗಲಿದ್ದಾರೆ.