ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆ ತೆಂಕಿಲ ಇದರ ಸಹಯೋಗದೊಂದಿಗೆ ಜು.15 ರಂದು ಪರ್ಲಡ್ಕ ಡಾ. ಶಿವರಾಮ ಕಾರಂತ ಈಜು ಕೊಳದಲ್ಲಿ ನಡೆದ ಪ್ರಾಥಮಿಕ/ಪ್ರೌಢ ಶಾಲಾ ವಿದ್ಯಾರ್ಥಿಗಳ ಜಲ್ಲಾ ಮಟ್ಟದ ಈಜು ಸ್ಪರ್ಧೆ 2022 ರಲ್ಲಿ ನೆಹರೂನಗರ ಸುದಾನ ರೆಸಿಡೆನ್ಸಿಯಲ್ ಸ್ಕೂಲ್ ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿ ನಂದನ್ ನಾಯ್ಕ್ 4 ಚಿನ್ನದ ಪದಕ 1 ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಇವರು ಮಂಜಲ್ಪಡ್ಪು ರಕ್ತೇಶ್ವರಿ ವಠಾರದ ನಿವಾಸಿ ರವಿಸಂಪತ್ ನಾಯ್ಕ್ ಮತ್ತು ಕ್ಷಮಿತಾ ದಂಪತಿಯ ಪುತ್ರ.