ಪುತ್ತೂರು : ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಜು.16ರಂದು ದರ್ಬೆ ಅಶ್ವಿನಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ರೈತ ಸಂಘದ ಪ್ರಮುಖರಾದ ಶ್ರೀಧರ ಶೆಟ್ಟಿ ಬೈಲುಗುತ್ತು, ಸಾಮಾಜಿಕ ಹೋರಾಟಗಾರ ಸುದರ್ಶನ್ ಮುರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು. ಎಎಪಿ ಪುತ್ತೂರು ಕ್ಷೇತ್ರದ ವಿಧಾನಸಭಾ ಅಧ್ಯಕ್ಷ ಡಾ. ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಷೋತ್ತಮ ಗೌಡ ಕೊಲ್ಪೆ, ಸಂಘಟನಾ ಕಾರ್ಯದರ್ಶಿ ಜನಾರ್ದನ ಬಂಗೇರ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಶೀದ್ ಜಟ್ಟಿಪಳ್ಳರವರು ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಮುಂದಿನ ದಿನಗಳಲ್ಲಿ ಬೃಹತ್ ಸಮಾವೇಶವನ್ನು ನಡೆಸುವುದಾಗಿ ತೀರ್ಮಾನಿಸಲಾಯಿತು.