ರಾಮಕುಂಜೇಶ್ವರ ಕ.ಮಾ.ಪ್ರೌಢಶಾಲೆಯಲ್ಲಿ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟ

0

 

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟ ನಡೆಯಿತು. ಪಂದ್ಯಾಟದಲ್ಲಿ ಕಡಬ ವಲಯದ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 173 ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮವನ್ನು ರಾಷ್ಟೀಯ ಮಟ್ಟದ ಚೆಸ್ ಆಟಗಾರ್ತಿ ಶುಭಪ್ರದ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಚೆಸ್ ತರಬೇತುದಾರ ಶ್ರೀಕಾಂತ್ ಆಲಂಕಾರು ಮಾತನಾಡಿ, ಚೆಸ್ ಆಟದ ಪ್ರಾಮುಖ್ಯತೆ ಮತ್ತು ಅದರಿಂದ ದೊರೆಯುವ ಉಪಯೋಗವನ್ನು ತಿಳಿಸಿದರು. ಪುತ್ತೂರು ತಾಲೂಕಿನ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರತ್ನರವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಯವರು ವಂದಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡರವರು ನಿರ್ದೇಶಿಸಿದರು.

LEAVE A REPLY

Please enter your comment!
Please enter your name here