ಬಲ್ನಾಡು:ನವೋದಯ ಸ್ವ-ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

0

ಪುತ್ತೂರು:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ನವೋದಯ ಸ್ವ-ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆಯು ಜು.13ರಂದು ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಿತು.

 


ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಸಮವಸ್ತ್ರ ವಿತರಿಸಿದರು. ಸಂಘದ ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಕೆ.ಚಂದಪ್ಪ ಪೂಜಾರಿ ಕಾಡ್ಲ, ಎ.ಎಂ ಪ್ರಕಾಶ್ಚಂದ್ರ ಆಳ್ವ, ಅಂಬ್ರೋಸ್ ಡಿ ಸೋಜ, ವಿನಯ, ಸುರೇಶ, ನವೀನ್ ಕರ್ಕೇರಾ, ಸೀತಾರಾಮ, ಎ.ಎಂ ಪ್ರವೀಣಚಂದ್ರ ಆಳ್ವ, ಪ್ರಮೋದ, ಶುಕವಾಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ ಗೌಡ, ನವೋದಯ ಸ್ವ ಸಹಾಯ ಸಂಘದ ಪ್ರೇರಕಿ ಜಯಂತಿ ಹಾಗೂ ವಿವಿಧ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರು, ಸಹಕಾರ ಸಂಘದ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here