ಬೊಳಂತೂರು: ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ

0

ವಿಟ್ಲ: ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಬೋಳಂತೂರಿನಲ್ಲಿ ನಡೆದಿದೆ.

ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ಯುವತಿಯೋರ್ವರು ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿ ಮನೆಗೆ ಹೋಗಲು ಸಿದ್ಧರಾಗುತ್ತಿದ್ದಂತೆ ಕಲ್ಲಡ್ಕ ಕಡೆಯಿಂದ ಎನ್.ಸಿ.ರೋಡ್ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಇಳಿದಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here