ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಯುವ ರೆಡ್ಕ್ರಾಸ್ ಘಟಕ, ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್, ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇವುಗಳ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜು.15 ರಂದು ವಿವೇಕಾನಂದ ಪಾಲಿಟೆಕ್ನಿಕ್ ಎ.ವಿ ಸಭಾಂಗಣದಲ್ಲಿ ನಡೆಯಿತು.
ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷ ಪ್ರಶಾಂತ್ ಶೆಣೈ, ಕಾರ್ಯದರ್ಶಿ ಜಯಗುರು ಆಚಾರ್, ರೋಟರಿ ವಲಯ ಸೇನಾನಿ ಪ್ರಮೋದ್ ಮಲ್ಲಾರ, ಸದಸ್ಯರಾದ ವಿಕ್ಟರ್ ಮಾರ್ಟಿಸ್, ಲಾರೆನ್ಸ್ ಗೊನ್ಸಾಲ್ವಿಸ್, ಇಜಾಜ್ ಅಹಮದ್, ಸುಲ್ತಾನ್ ಆರಿಫ್, ಸುಬ್ರಹ್ಮಣ್ಯ ಹೆಬ್ಬಾರ್, ದಯಾನಂದ್ ಕೆ.ಎಸ್, ರಾಮಚಂದ್ರ ಪುಚ್ಚೇರಿ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.