ಪುತ್ತೂರು: ಮುಂಡೂರು ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ ನೇರೋಳ್ತಡ್ಕ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ಆಮ್ ಆದ್ಮಿ ಪಕ್ಷದ ಧ್ಯೇಯ ಮತ್ತು ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಭ್ರಷ್ಟಾಚಾರ ರಹಿತ ಜನಪರ ಯೋಜನೆಗಳ ಅಧಿಕಾರವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಮಹಮ್ಮದ್ ಆಲಿ ತಿಳಿಸಿದ್ದಾರೆ.
ಮಹಮ್ಮದ್ ಆಲಿಯವರು ಮುಂಡೂರು ಗ್ರಾ.ಪಂ.ಗೆ ನಡೆದ ಚುನಾವಣೆಯಲ್ಲಿ ಸರ್ವೆ 3ನೇ ವಾರ್ಡ್ನಿಂದ ಯಾವುದೇ ಪಕ್ಷದ ಬೆಂಬಲವಿಲ್ಲದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ಮೊದಲ ಬಾರಿಗೆ ಗ್ರಾ.ಪಂ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಇವರು ಕೊರೋನಾ ಸಂದರ್ಭದಲ್ಲಿ ಅನೇಕ ಕೊರೋನಾ ಸೋಂಕಿತರನ್ನು ಆಟೋ ರಿಕ್ಷಾ ಮೂಲಕ ಉಚಿತವಾಗಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿ ಸುದ್ದಿಯಾಗಿದ್ದರು.