ಪುತ್ತೂರು : ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಶಾಸಕ ಸಂಜೀವ ಮಠಂದೂರುರವರು ದೀಪ ಬೆಳಗಿಸಿ ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಮಣ್ಯಂ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷ ಅಮ್ಮಣ್ಣ ರೈ ಡಿ. ಪಾಪೆಮಜಲು ಉಪಸ್ಥಿತರಿದ್ದರು.
ಸನ್ಮಾನ: ತಾಲೂಕಿಗೆ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಲ್ಲಿ 621 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದ ತನ್ವಿ ಕೆ. ರವರನ್ನು ಸನ್ಮಾನಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಅನುಷ್ ಕೆ.ಡಿ, ಪವಿತ್ರಾ ಕೆ., ಅರ್ಪಿತಾ ಎಂ.ಬಿ., ಅನಿಲ್ ಕುಮಾರ್ ಜಿ., ಶ್ರುತಿ, ಯಕ್ಷಿತಾ ಬಿ., ಪ್ರೀತಿಕಾ ಸಿ. ಎಸ್., ಅನನ್ಯ ಜಿ. ರವರನ್ನು ಶಾಲು ಸ್ಮರಣಿಕೆ ಫಲಪುಷ್ಪದೊಂದಿಗೆ ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಅನೇಕ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಲೋಕೇಶ್ ರೈ ಅಮೈ ರವರನ್ನು ಶಾಸಕರು ಸನ್ಮಾನಿಸಿದರು.
ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಎಸ್ಡಿಎಮ್ಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಪೊಷಕರು, ಉಪಸ್ಥಿತರಿದ್ದರು. ಶಿಕ್ಷಕರಾದ ಪೂರ್ಣಿಮಾ ಶೆಟ್ಟಿ, ಇಂದಿರಾ ಕೆ., ಪ್ರವೀಣಾ ರೈ ಬಿ., ಹರಿಪ್ರಸಾದ್, ಶಾಲೆಟ್ ಜೇನ್ ರೆಬೆಲ್ಲೊ, ಹರಿಣಾಕ್ಷಿ ಕೆ., ಪವಿತ್ರಾ ಉಡುಪ ಸಹಕರಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ ಸ್ವಾಗತಿಸಿ ಮುಖ್ಯೋಪಾಧ್ಯಾಯ ಮೋನಪ್ಪ ಬಿ. ಪೂಜಾರಿ ವಂದಿಸಿದರು. ಶಿಕ್ಷಕಿ ಸವಿತಾ ಪಿ. ಕಾರ್ಯಕ್ರಮ ನಿರೂಪಿಸಿದರು.