ಪುತ್ತೂರು: ಪುತ್ತೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ತ್ರಿವೇಣಿ ರಾವ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮಂಗಳೂರು ನೀರುಮಾರ್ಗ ನಿವಾಸಿಯಾಗಿರುವ ತ್ರಿವೇಣಿ ರಾವ್ ಅವರು 2002ರಲ್ಲಿ ಮಂಗಳೂರಿನ ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ವೃತ್ತಿಗೆ ಸೇರಿದ್ದರು. ಬಳಿಕ ಬೆಂಗಳೂರು ಜಂಟಿ ನಿಬಂಧಕರ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ, ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿಯಲ್ಲಿ ಅಧೀಕ್ಷಕರಾಗಿ, ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿಯಾಗಿ, ಬಂಟ್ವಾಳದಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿಯಾಗಿ, ಮಡಿಕೇರಿ ಉಪನಿಬಂಧಕರ ಕಛೇರಿಯಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.