ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ದ.ಕ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇದರ ಸಹಯೋಗದೊಂದಿಗೆ ಪರ್ಲಡ್ಕ ಡಾ|ಶಿವರಾಮ ಕಾರಂತ ಈಜುಕೊಳದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೇಗಳಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯ ವಿದ್ಯಾರ್ಥಿಗಳು 6ಬೆಳ್ಳಿ ಪದಕ, 1 ಕಂಚಿನ ಪದಕ ಪಡೆದಿದ್ದಾರೆ.
ವಿದ್ಯಾರ್ಥಿ ಅನ್ವಿತ್ ರೈ 3 ಬೆಳ್ಳಿ ಪದಕ ಹಾಗೂ 1ಕಂಚಿನ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅನ್ವಿತ್ ರೈಯವರು ಜು.17 ರಂದು ಹಾಸನದಲ್ಲಿ ಡಿಪಾರ್ಟ್ಮೆಂಟ್ ಆಫ್ ಯೂತ್ ಎಂಪವರ್ಮೆಂಟ್ ಆಂಡ್ ಸ್ಪೋರ್ಟ್ಸ್ನ ವತಿಯಿಂದ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ 50ಮೀ ಮತ್ತು 100ಮೀ ಫ್ರೀ ಸ್ಟೈಲ್ ರಿಲೇ ಮತ್ತು 4*50ಮೀ ಮಿಡ್ಲೆ ರಿಲೇಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ಪರ್ಪುಂಜ ಬಿ.ಎನ್ ಅನಿಲ್ ಕುಮಾರ್ ರೈ ಹಾಗೂ ದಿವ್ಯ ಎ.ರೈಯವರ ಪುತ್ರ. ಉಳಿದಂತೆ ಧ್ರುವ ಭಂಡಾರಿ, ಪ್ರಥ್ವಿ ಸಾಗರ್, ನಿರಜಿತ್ ಭಟ್ರವರು 100&4 ರಿಲೇಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರಾದ ನರೇಶ್ ಲೋಬೊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.