ಪುತ್ತೂರು : ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಮಾತನಾಡಿ ಶಿಕ್ಷಕರಿಗೆ ಪ್ರಥಮ ಚಿಕಿತ್ಸೆ ಮಾಡುವ ವಿಧಾನ ತಿಳಿದಿರಬೇಕು ಮತ್ತು ಅದರ ಅರಿವಿರಬೇಕು ಎಂದರು. ಕಾಲೇಜಿನ ಪ್ರಾಧ್ಯಾಪಕಿ ಅನುರಾಧ ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಚಿತ್ರಾಕ್ಷಿ ಸ್ವಾಗತಿಸಿ, ಅಶ್ವಿನಿ ಕೆ. ವಂದಿಸಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.