ವಿಟ್ಲ: ಬಿಲ್ಲವ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಸ್ಪರ್ಧೆ

0

ವಿಟ್ಲ: ಬಿಲ್ಲವ ಸಂಘ ವಿಟ್ಲ ಇದರ ಬೆಳ್ಳಿಹಬ್ಬ ಸಂಭ್ರಮೋತ್ಸವದ 25 ಕಾರ್ಯಕ್ರಮಗಳಲ್ಲಿ ಒಂಬತ್ತನೇ ಕಾರ್ಯಕ್ರಮ ಚಿತ್ರಕಲಾಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಬ್ರಹ್ಮಶ್ರೀ ಸಭಾಭವನದಲ್ಲಿ ನಡೆಯಿತು. ಬೆಳ್ಳಿ ಹಬ್ಬ ಸಂಭ್ರಮೋತ್ಸವ ಸಮಿತಿಯ ಅಧ್ಯಕ್ಷರಾದ ಡಾ ಗೀತಾಪ್ರಕಾಶ್ ಚಿತ್ರ ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಅಧ್ಯಕ್ಷರು ಹರೀಶ್ ಸಿ ಎಚ್, ಗೌರವಾಧ್ಯಕ್ಷರಾದ ದಾಸಪ್ಪ ಪೂಜಾರಿ ನೆಕ್ಕಿಲಾರು ,ಉಪಾಧ್ಯಕ್ಷರಾದ ನೇಮಿರಾಜ್ ಅಳಿಕೆ, ಮಹಿಳಾ ಘಟಕದ ಗೌರವಾಧ್ಯಕ್ಷರು ಸುಜಾತಾ ಸಂಜೀವ ಪೂಜಾರಿ ಎನ್ , ಯುವ ವಾಹಿನಿ ಅಧ್ಯಕ್ಷರಾದ ಯಶವಂತ್ ಪೂಜಾರಿ ಎನ್, ಬ್ರಹ್ಮಶ್ರೀ ನಾರಾಯಣ ಗುರು ಸಹಕಾರಿ ಸಂಘ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್., ಚಂದ್ರಹಾಸ ಸುವರ್ಣ ,ಲಕ್ಷ್ಮಣ ಪೂಜಾರಿ, ಹರೀಶ್ ವಿಟ್ಲ ,ದಾಮೋದರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಸಂಭ್ರಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ವಿಟ್ಲ ಸ್ವಾಗತಿಸಿದರು ,ಜಗದೀಶ್ ಪಾಣೆಮಜಲು ವಂದಿಸಿದರು. ಧನಲಕ್ಷ್ಮಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು, 80 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here