ಪುತ್ತೂರು: ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಶ್ರಮದಾನದ ಮೂಲಕ ಸರ್ವೆ ಅಂಗನವಾಡಿ ಕೇಂದ್ರದ ಸುತ್ತ ಮುತ್ತ ಬೆಳೆದಿದ್ದ ಗಿಡ-ಗಂಟೆ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಯುವಕ ಮಂಡಲದ ವತಿಯಿಂದ ಕಳೆದ ಒಂದು ತಿಂಗಳಿಂದ ಸರಣಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಗ್ರಾಮದ ಶಿಕ್ಷಣ ಸಂಸ್ಥೆಗಳ ಆವರಣಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರಮದಾನದಲ್ಲಿ ಯುವಕ ಮಂಡಲದ ಅಧ್ಯಕ್ಷ ಗೌತಮ್ರಾಜ್ ಕರಂಬಾರು, ಪ್ರ.ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಪದಾಧಿಕಾರಿಗಳಾದ ಕೀರ್ತನ್ ಸರ್ವೆದೋಳಗುತ್ತು, ಪ್ರಮೋದ್ ಕುಮಾರ್ ಅಲೇಕಿ ಕಾರ್ಯಕಾರಿ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಕರುಂಬಾರು, ರಾಜೇಶ್ ಎಸ್.ಡಿ, ಎಸ್.ಎಂ ಶರೀಫ್ ಪಾಲ್ಗೊಂಡರು.