ನೆಲ್ಯಾಡಿ: ಕಡಬ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪ್ರಥಮ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಕೊಣಾಲು ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಶಾಂತರಾಮ ಓ. ರವರನ್ನು ಕೊಣಾಲು ಪ್ರೌಢಶಾಲಾ ಎಸ್ಡಿಎಂಸಿ ಹಾಗೂ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.
ಎಸ್ಡಿಎಂಸಿ ಕಾರ್ಯಾಧ್ಯಕ್ಷ ಕಮಲಾಕ್ಷ, ಶಾಲಾ ಮುಖ್ಯಶಿಕ್ಷಕ ಸತೀಶ್ಚಂದ್ರ ಎ.ಎಸ್., ಸಹಶಿಕ್ಷಕರು ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಎಂ.,ಕಾರ್ಯಕ್ರಮ ನಿರೂಪಿಸಿದರು.