ಪುತ್ತೂರು: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಕನಕ ಭವನದಲ್ಲಿ ನಡೆದ ಧಾರವಾಡ ನುಡಿ ಸಡಗರ ಸಮಾವೇಶದಲ್ಲಿ ಯುವ ಸಾಹಿತಿ, ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಅವರಿಗೆ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಿಲಾಯಿತು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ ಬಿ ಗುಡಸಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಪ್ರೊ. ನಿಜಲಿಂಗಪ್ಪ ಮಟ್ಟಿಹಾಳ ಪ್ರಶಸ್ತಿ ವಿತರಿಸಿದರು. ಯುವನಟ ನಿರ್ದೇಶಕ ನಿಂಗರಾಜು ಸಿಂಗಾಡಿ ಚೇತನ ಫೌಂಡೇಶನ ಕರ್ನಾಟಕ ಅಧ್ಯಕ್ಷ ಚಂದ್ರಶೇಕರ ಮಾಡಲಗೇರಿ ಮತ್ತಿತರರು ಉಪಸ್ಥಿತರಿದ್ದರು.