ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿ ಎಂಬಲ್ಲಿರುವ ಇಕೋ ವಿಶನ್ ಹಾಳೆ ತಟ್ಟೆ ತಯಾರಿಕಾ ಘಟಕದಲ್ಲಿ ಜು.20ರಂದು ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಬೆಳಗ್ಗೆ 6ಗಂಟೆ ಸುಮಾರಿಗೆ ಫ್ಯಾಕ್ಟರಿಯ ಮಹಡಿಯಲ್ಲಿ ದಟ್ಟ ಹೊಗೆ ಆವರಿಸುತ್ತಿರುವುದನ್ನು ಕಂಡ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಮಾಲಕರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಆ ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಆಗಮಿಸಿ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿದೆ. ತಡರಾತ್ರಿಯೇ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದ್ದು, ಮುಂಜಾನೆ ವೇಳೆ ಸಿಬ್ಬಂದಿಗಳ ಗಮನಕ್ಕೆ ಬಂದಿದೆ. ಘಟನೆಯಿಂದಾಗಿ ಮೂರು ಮೆಶಿನ್, ತಯಾರಿಸಿಟ್ಟ ಲಕ್ಷಾಂತಾರ ಹಾಳೆತಟ್ಟೆ ಸಹಿತ ಇತರ ಸಾಮಾಗ್ರಿಗಳು ನಾಶವಾಗಿದೆ. ಘಟನೆಯಿಂದಾಗಿ ಗೋಡೆ ಬಿರುಕು ಬಿಟ್ಟಿದೆ, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಸಂಸ್ಥೆಯ ಮಾಲಕರಾದ ರಾಜಾರಾಮ್ ಭಟ್ ಬಲಿಪಗುಳಿ ರವರು ತಿಳಿಸಿದ್ದಾರೆ.