ಪುತ್ತೂರು: ದ.ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ದ.ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಪ್ರ.ಕಾರ್ಯದರ್ಶಿ ಹಾಗೂ ಉಪ್ಪಿನಂಗಡಿ, ಪುತ್ತೂರು, ವಿಟ್ಲ ವಲಯದ ಉಸ್ತುವಾರಿ ವಿ.ಜ್ಞಾನಶೀಲನ್ ಸಂಪಾಜೆಯವರು ಜು.20 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಗೆ ಅಧಿಕೃತ ಭೇಟಿ ನೀಡಿದರು. ಅಸಂಘಟಿತ ಕಾರ್ಮಿಕರ ಮುಂದಿನ ಯೋಜನೆಗಳ ಹಾಗೂ ಪಕ್ಷದ ಸಂಘಟನೆಯ ಬಗ್ಗೆ ಭೇಟಿ ಸಂದರ್ಭದಲ್ಲಿ ಚರ್ಚಿಸಲಾಯಿತು. ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪುತ್ತೂರು ಮತ್ತು ಉಪ್ಪಿನಂಗಡಿ ಬ್ಲಾಕ್ನ ಅಸಂಘಟಿತ ಕಾರ್ಮಿಕರ ಅಧ್ಯಕ್ಷರುಗಳಾದ ಮೆಲ್ವಿನ್ ಮೊಂತೆರೊ ಮತ್ತು ಶೇಷಪ್ಪ, ಜಿಲ್ಲಾ ಕಾರ್ಮಿಕ ಸಮಿತಿಯ ಕಾರ್ಯದರ್ಶಿ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.
Home ಚಿತ್ರ ವರದಿ ದ.ಕ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪ್ರ.ಕಾರ್ಯದರ್ಶಿ ವಿ.ಜ್ಞಾನಶೀಲನ್ ಸಂಪಾಜೆ ಪುತ್ತೂರು ಬ್ಲಾಕ್ ಕಾಂಗ್ರೆಸ್...