ಸವಣೂರು: ಶಾಂತಿನಗರದಲ್ಲಿ ಹುಚ್ಚು ನಾಯಿ ದಾಳಿ-ಇಬ್ಬರಿಗೆ ಗಾಯ

0

  • ಸ್ಥಳೀಯರು ಆತಂಕದಲ್ಲಿ

ಪುತ್ತೂರು: ಹುಚ್ಚು ನಾಯಿ ಕಡಿತಕ್ಕೊಳಗಾಗಿ ಇಬ್ಬರು ಗಾಯಗೊಂಡಿರುವ ಘಟನೆ ಸವಣೂರು ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಶಾಂತಿನಗರದ ಸಮೀರ್ ಹಾಗೂ ಹಸೈನ್ ಎಂಬವರು ಹುಚ್ಚು ನಾಯಿ ಕಡಿತಕ್ಕೊಳಗಾಗಿದ್ದು ಸ್ಥಳೀಯವಾಗಿ ಎರಡು ಆಡುಗಳಿಗೆ ಹಾಗೂ ಬೆಕ್ಕುಗಳಿಗೆ ಇದೇ ಹುಚ್ಚು ನಾಯಿ ಕಡಿದಿರುವುದಾಗಿ ತಿಳಿದು ಬಂದಿದೆ. ಮಗುವಿನ ಮೇಲೆ ನಾಯಿ ದಾಳಿ ಮಾಡಿದ ಸಂದರ್ಭ ಮಗುವನ್ನು ರಕ್ಷಿಸುವ ಸಂದರ್ಭ ಓರ್ವನಿಗೆ ನಾಯಿ ಕಚ್ಚಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಹುಚ್ಚು ನಾಯಿ ರಂಪಾಟದಿಂದ ಸ್ಥಳೀಯರು ಭಯಭೀತಗೊಂಡಿದ್ದು ಮನೆಯಿಂದ ಹೊರಬರಲೂ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಶಾಲೆ, ಮದರಸಗಳಿಗೆ ತೆರಳುವ ಮಕ್ಕಳು ಭಯಭೀತಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತ್ ಈ ಬಗ್ಗೆ ತುರ್ತು ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here