ಪುತ್ತೂರು: ದ.ಕ.ಜಿ.ಪಂ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಈಜು ಸ್ಪರ್ಧೆ ಜು.25ರಂದು ಪುತ್ತೂರು ಬಾಲವನ ಈಜುಕೊಳದಲ್ಲಿ ನಡೆಯಿತು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಧನ್ವಿತ್.ಕೆ (ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ದರ್ಬೆಯ ಮ್ಯಾನೇಜರ್ ಕೇಶವ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರ), ಪ್ರತೀಕ್ಷ ಆಳ್ವ (ಇಂಜಿನಿಯರ್ ಪಡುಮಲೆ ಚಂದ್ರಶೇಖರ್ ಆಳ್ವ ಮತ್ತು ಉಷಾ.ಸಿ.ಆಳ್ವರ ಪುತ್ರಿ) ಮತ್ತು ಮಹಿನ್.ಪಿ.ಆರ್(ರಾಕೇಶ್ ಕುಮಾರ್ ಮತ್ತು ಜ್ಯೋತಿ.ಎನ್ ದಂಪತಿ ಪುತ್ರಿ) ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಹಾಗೂ ನಮನ್ ನಾಯ್ಕ್(ಸಂದೀಪ್ ನಾಯ್ಕ್.ಬಿ ಮತ್ತು ನಮಿತಾ ನಾಯ್ಕ್.ಬಿ ಇವರ ಸುಪುತ್ರ) ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.
Home ಚಿತ್ರ ವರದಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಧನ್ವಿತ್.ಕೆ, ಪ್ರತೀಕ್ಷ ಆಳ್ವ, ಮಹಿನ್.ಪಿ.ಆರ್ ರಾಜ್ಯಮಟ್ಟಕ್ಕೆ ಆಯ್ಕೆ