ಪುತ್ತೂರು:ಸುಳ್ಯದ ಜಾಲ್ಸೂರು ವಿನೋಬನಗರದಲ್ಲಿರುವ ವಿವೇಕಾನಂದ ಸ್ಕೂಲ್ನಲ್ಲಿ ಜು.21ರಂದು ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ನೆಹರು ನಗರದ ವಿವೇಕಾನಂದ ಆಂಗ್ಲ ಮಾಧ್ಯಮ (ಸಿ ಬಿ ಎಸ್ ಇ) ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಆಯುಷ್ ನರೇಂದ್ರ 17 ರ ವಯೋಮಿತಿ ಮತ್ತು 7 ನೇ ತರಗತಿಯ ವಿದ್ಯಾರ್ಥಿನಿ ಕೃತಿ ರೈ 14 ರ ವಯೋಮಿತಿಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.