- ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಪುತ್ತೂರು; ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಎರಡು ಭಿನ್ನಕೋಮಿನ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿರುವ ಘಟನೆ ಜು.23ರಂದು ನಡೆದಿದೆ.
ವಿದ್ಯಾರ್ಥಿಗಳ ಭಿನ್ನ ಕೋಮಿನ ಎರಡು ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಮನಸ್ತಾಪ ಹೊಡೆದಾಟದ ಹಂತಕ್ಕೆ ತಲುಪಿದೆ. ಈ ಸಂದರ್ಭದಲ್ಲಿ ಸಂಸ್ಥೆಗೆ ಸಂಬಂಧಪಡದ ವ್ಯಕ್ತಿಯೋರ್ವರು ಒಳಗಡೆ ಪ್ರವೇಶಿಸಿ ಹಲ್ಲೆ ನಡೆಸಿದ್ದರು. ವಿದ್ಯಾರ್ಥಿಗಳ ಹೊಡೆದಾಟ ಇಲ್ಲಿಗೆ ಮುಗಿಯದೆ ಬಸ್ ನಿಲ್ದಾಣಕ್ಕೆ ಆಗಮಿಸಿ ತಂಡ ಅಲ್ಲಿಯೂ ಪರಸ್ಪರ ಹೊಡೆದಾಟ ನಡೆದಿರುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಒಂದು ತಂಡ ಇಬ್ಬರು ವಿದ್ಯಾರ್ಥಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.