ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಸಾಂಪ್ರದಾಯಿಕ ನೇಜಿ ನಾಟಿ

0

ಪುತ್ತೂರು; ಹಡೀಲು ಗದ್ದೆಯಲ್ಲಿ ಬೇಸಾಯ ಮಾಡುವ ಗದ್ದೆಗೆ ಇಳಿಯೋಣ ಬೇಸಾಯ ಮಾಡೋಣ ಕಾರ್ಯಕ್ರಮದ ಅಂಗವಾಗಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವತಿಯಿಂದ ಸಂಪ್ಯ ನವಚೇತನ ಯುವಕ ಮಂಡಲದ ಆಶ್ರಯದಲ್ಲಿ ಜು.24ರಂದು ನಡೆದ ಸಾಂಪ್ರದಾಯಿಕ ಶೈಲಿಯಲ್ಲಿ ನೇಜಿ ನೆಟ್ಟು ಬೇಸಾಯ ಮಾಡಿದರು.


ಸಂಪ್ಯ‌ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಗದ್ದೆ ಬೇಸಾಯ ನಡೆಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸಮಿತಿ ಸದಸ್ಯರು, ಸಂಪ್ಯ ನವಚೇತನ ಯುವಕ ಮಂಡಲದ ಆದ್ಯಕ್ಷ ವಿಜಯ ಬಿ.ಎಸ್. ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಊರ ಭಕ್ತರು ಸಾಂಪ್ರದಾಯಿಕ ನೇಜಿ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಲ್ಲಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ‌ ಉಮೇಶ್ ನೇಜಿ ನಾಟಿಯ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here