ಮಂಜಲ್ಪಡ್ಪು:ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

0

 

ಪುತ್ತೂರು:ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ಚರಂಡಿಗೆ ಬಿದ್ದ ಘಟನೆ ಜು.24ರಂದು ಬೈಪಾಸ್ ರಸ್ತೆಯ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.
ಎದುರಿನಿಂದ ಬರುತ್ತಿದ್ದ ವಾಹನವೊಂದನ್ನು ಲಾರಿಯೊಂದು ಹಿಂದಿಕ್ಕಿ ವೇಗದಲ್ಲಿ ಬರುತ್ತಿರುವುದನ್ನು ಗಮನಿಸಿ ಕಾರನ್ನು ರಸ್ತೆ ಬದಿಗೆ ಚಲಾಯಿಸಿದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪ ಪಕ್ಕದ ಚರಂಡಿಗೆ ಉರುಳಿಬಿದ್ದಿದೆ. ಕಾರಿನಲ್ಲಿ ಚಾಲಕನೋರ್ವನೇ ಪ್ರಯಾಣಿಸುತ್ತಿದ್ದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಚಾಲಕನ್ನು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಲಕ್ಷ್ಮೀಶ ಎಂದು ಗುರುತಿಸಲಾಗಿದೆ. ಅವರು ಕಾಲೇಜಿನಿಂದ ಎಣ್ಮೂರಿನಲ್ಲಿರುವ ತನ್ನ ಮನೆಗೆ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ನಗರ ಠಾಣಾ ಪೊಲೀಸ್ ಸಿಬಂದಿ ಶಿವಪ್ಪ ನಾಯ್ಕ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕಾರನ್ನು ಮೇಲಕ್ಕೆ ಎತ್ತಿ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here