ಹಾವೇರಿ ಮೂಲದ ಕಾರ್ಮಿಕ ಮೃತ್ಯು ವಾರೀಸುದಾರರಿಗಾಗಿ ಪೊಲೀಸರ ಮನವಿ

0

ಪುತ್ತೂರು: ಹಾವೇರಿ ಮೂಲದ ಕಾರ್ಮಿಕರೋರ್ವರು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ವಾರೀಸುದಾರರ ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿರುವ ದಾಖಲಾತಿಯಂತೆ ಮೃತರನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬಸಪ್ಪ ಎಂಬವರ ಪುತ್ರ ಸಂಗಮೇಶ(47ವ.) ಎಂದು ಗುರುತಿಸಲಾಗಿದೆ. ಸಂಗಮೇಶ ಜು.22ರಂದು ದರ್ಬೆ ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಬದಿಯಲ್ಲಿ ಕುಸಿದು ಬಿದ್ದಿದ್ದರು. ಅವರನ್ನು 108 ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜು.23ರಂದು ರಾತ್ರಿ ಮೃತಪಟ್ಟಿದ್ದಾರೆ. ಮೃತರ ವಾರೀಸುದಾರರು ಯಾರೂ ಇಲ್ಲದೇ ಇದ್ದು ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತರ ವಾರೀಸುದಾರರಿದ್ದಲ್ಲಿ ನಗರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here