ಆ.15ರಂದು ದೆಹಲಿಯ ಸ್ವಾತಂತ್ರ್ಯೋತ್ಸವದ ಪೆರೇಡ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ:ರಾಜ್ಯ ತಂಡಕ್ಕೆ ಸುಳ್ಯದ ಸಾಹಿತ್ಯ ಆಯ್ಕೆ

0

ಪುತ್ತೂರು : ಆ.15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನೃತ್ಯ ಪ್ರದರ್ಶನ ನೀಡಲು ಕರ್ನಾಟಕ ರಾಜ್ಯ ತಂಡ ತೆರಳಲಿದ್ದು ಈ ತಂಡದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಳ್ಯದ ಸಾಹಿತ್ಯ ಪುರುಷೋತ್ತಮ್ ಭಾಗವಹಿಸಲಿದ್ದಾರೆ.

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಿಬಿಎ ವಿದ್ಯಾರ್ಥಿನಿಯಾಗಿರುವ ಸಾಹಿತ್ಯ ಎನ್.ಸಿ.ಸಿ. ತಂಡದ ವಿದ್ಯಾರ್ಥಿನಿ. ಇತ್ತೀಚೆಗೆ ನಡೆದ ಎನ್.ಸಿ.ಸಿ. ಕ್ಯಾಂಪ್‌ನಲ್ಲಿ ಸಾಹಿತ್ಯ ನೀಡಿದ ನೃತ್ಯ ಪ್ರದರ್ಶನ ಆಯ್ಕೆಗಾರರ ಗಮನ ಸೆಳೆದಿತ್ತು. ಮಂಗಳೂರು, ಉಡುಪಿ, ಕೊಡಗು ಮೂರು ಜಿಲ್ಲೆಯ ಎನ್‌ಸಿಸಿ ತಂಡದಿಂದ ಇಬ್ಬರು ಆಯ್ಕೆಯಾಗಿದ್ದು ಅವರಲ್ಲಿ ಕು.ಸಾಹಿತ್ಯ ಒಬ್ಬರು. ಸಾಹಿತ್ಯ ಇದೀಗ ಬೆಂಗಳೂರಿನಲ್ಲಿ ರಾಜ್ಯ ತಂಡದೊಂದಿಗೆ ತರಬೇತಿ ಪಡೆಯುತ್ತಿದ್ದು ಜು.28ರಂದು ಕರ್ನಾಟಕ ತಂಡದೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈಕೆ ಸುಳ್ಯದ ಪಿಗ್ಮಿ ಸಂಗ್ರಾಹಕಿ ಹಾಗೂ ಗಾಯಕಿ ಕೇರ್ಪಳದ ಆರತಿ ಹಾಗೂ ಬೆಳ್ಳಾರೆ ಜ್ಞಾನಗಂಗಾ ಶಾಲೆಯ ವಾಹನ ಚಾಲಕ ಪುರುಷೋತ್ತಮ್ ದಂಪತಿ ಪುತ್ರಿ. ಲೆಫ್ಟಿನೆಂಟ್ ಬಾಮಿ ಅತುಲ್ ಶೆಣೈಯವರು ಎನ್.ಸಿ.ಸಿ. ಶಿಕ್ಷಕರಾಗಿದ್ದಾರೆ.

LEAVE A REPLY

Please enter your comment!
Please enter your name here