ಪುತ್ತೂರು: 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಯೋಧರ ಧೈರ್ಯ ಸಾಹಸದ ಕೆಚ್ಚೆದೆಯ ಹೋರಾಟದಲ್ಲಿ ಕಾರ್ಗಿಲ್ ಯುದ್ಧವನ್ನು ಜಯಿಸಿದ ದಿನ ಜುಲೈ 26 ಈ ವಿಜಯ ದಿನವನ್ನು ನಾಳೆ ಸಂಜೆ 5.30 ಗಂಟೆಗೆ ಮೇಜರ್ ಸಂದೀಪ್ ಉನ್ನಿಕೃಷ್ಣನ್ ವೃತ್ತ ಬಳಿ ಹಿಂದು ಜಾಗರಣ ವೇದಿಕೆ ಈಶ್ವರಮಂಗಲ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ರಾಷ್ಟ್ರಭಕ್ತ ಭಾಂದವರು ಮತ್ತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿಹಿಂದು ಜಾಗರಣ ವೇದಿಕೆ ಈಶ್ವರಮಂಗಲ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.