ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಆವರಣಗೋಡೆ ರಸ್ತೆ ಬದಿಗೆ ವಾಲಿಕೊಂಡಿದ್ದು ಯಾವುದೇ ಸಂದರ್ಭ ಬಿದ್ದು ಸಾರ್ವಜನಿಕ ಕಷ್ಟನಷ್ಟಗಳಿಗೆ ಕಾರಣವಾಗಬಹುದಾಗಿದೆ. ಆದ್ದರಿಂದ ಈ ಕುರಿತು ಕೂಡಲೇ ಗಮನ ಹರಿಸಿ ಸಮಸ್ಯೆ ಬಗೆ ಹರಿಸುವಂತೆ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ಮತ್ತು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಸಲ್ಲಿಸಲಾಗಿದೆ.
ಬಹಳ ಹಳೇಯ ಆವರಣ ಗೋಡೆ ಇದಾಗಿದ್ದು ರಸ್ತೆಯಲ್ಲಿ ಹೋಗುವ ವಾಹನಗಳು ಕಂಪನದಿಂದ ಆವರಣಗೋಡೆ ಶಿಥಿಲವಾಗುವ ಕಾರಣಗಳಿವೆ. ಇದು ಸಾರ್ವಜನಿಕ ರಸ್ತೆ ಬದಿಯಲ್ಲಿ ಇರುವುದು ಮತ್ತು ರಸ್ತೆಯ ಮೇಲೆಯೇ ಬೀಳುವ ಸಾಧ್ಯತೆಗಳಿರುವುದರಿಂದ ರಸ್ತೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಾರ್ವಜನಿಕ ವಾಹನಗಳು ಸದಾ ಸಂಚರಿಸುತ್ತದೆ. ಆದ್ದರಿಂದ ಅಪಾಯಗಳು ಸಂಭವನೀಯವಾಗಿದೆ. ಇದನ್ನು ಕೂಡಲೇ ಪರಿಶೀಲನೆ ಸೂಕ್ತ ಕ್ರಮಕ್ಕಾಗಿ ಮನವಿಯಲ್ಲಿ ಸಲ್ಲಿಸಲಾಗಿದೆ.