ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ 14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದರ್ಬೆ ಸಂತ ಫಿಲೋಮಿನಾ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೀಶ ಆರ್.ಎಸ್ ರವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋರವರಿಂದ ಕ್ರಿಕೆಟ್ ತರಬೇತಿಯನ್ನು ಪಡೆಯುತ್ತಿರುವ ಇವರು ಎಪಿಎಂಸಿ ಬಳಿಯ ರವಿ ಪ್ರೊವಿಜನಲ್ ಸ್ಟೋರ್ ಮಾಲಕ ರವಿಚಂದ್ರ ಎಸ್ ಹಾಗೂ ಶ್ವೇತಾ ಎಂ.ಆರ್ ರವರ ಪುತ್ರಿ.