ಕಡಬ ಸರಸ್ವತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ, ಮಾಜಿ ಸೈನಿಕರಿಗೆ ಗೌರವಾರ್ಪಣೆ

0

ಕಡಬ: ಇಲ್ಲಿನ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯ ದಲ್ಲಿ ಕಾರ್ಗಿಲ್ ವಿಜಯ ದಿವಸ್ ದಿವಸ ಆಚರಣೆ ಅಂಗವಾಗಿ ಮಾಜಿ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಕಾರ್ಗಿಲ್ ಯುದ್ದ ದಲ್ಲಿ ವೀರ ಮರಣವನ್ನಪ್ಪಿದ ಯೋಧರ ಭಾವಚಿತ್ರ ಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ರಘುನಾಥ ಹೆಬ್ಬಾರ್ ವಾಳ್ಯ, ಗೋಪಾಲ್ ವಿ. ಬಿಳಿನೆಲೆ, ವಾಸುದೇವ ಗೌಡ, ಸೈಮನ್ ಕೆ.ಸಿ. ಸುಬೇದಾರ್ ಗೋಪಾಲಕೃಷ್ಣ ಎ.ಕೆ.ಅವರ ಸ್ಮರಣಾರ್ಥ ಗೀತಾ ಅಮೈ ಕೇವಳ, ವಾಡ್ಯಪ್ಪ ಗೌಡ ಮಂಡೆಕರ, ದೇಶದ ವಿವಿಧೆಡೆ ಸೈಕಲ್ ಸವಾರಿ ಮೂಲಕ ಸಮಾಜ ಜಾಗೃತಿ ಮೂಡಿಸುತ್ತಿರುವ ಮಧ್ಯಪ್ರದೇಶ ಮೂಲದ ಬೃಜೇಶ್ ಶರ್ಮಾರವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ವಹಿಸಿದ್ದರು, ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ವಿಧುಷಿ ಪ್ರಮೀಳಾ ಲೋಕೇಶ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಾಧವ ಕೋಲ್ಪೆ ಸ್ವಾಗತಿಸಿದರು. ಶಿಕ್ಷಕ ಶಿವಪ್ರಸಾದ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕ ವಸಂತ ಕರ್ಂಬೋಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ದಲ್ಲಿ ಆಡಳಿತ ಸಮಿತಿಯ ಸದಸ್ಯರಾದ ಶಿವಪ್ರಸಾದ್ ರೈ ಮೈಲೇರಿ,ಚಿನ್ನಪ್ಪ ಗೌಡ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ-ಶಿಕ್ಷಕಿಯರು ಸನ್ಮಾನಿತರ ಪರಿಚಯ ವಾಚಿಸಿದರು. ಇದೇ ಸಂದರ್ಭದಲ್ಲಿ ಹುಟ್ಟು ಹಬ್ಬ ಆಚರಿಸುತ್ತಿರುವ ವಿದ್ಯಾರ್ಥಿ ಸಹನ ಅವರು ವಿದ್ಯಾಸಂಸ್ಥೆ ಗೆ ಗ್ಯಾಸ್ ಸ್ಟವ್ ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here