ಪುತ್ತೂರು: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಲಾರಿ ಚಾಲಕನನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
2019ರ ಎಪ್ರಿಲ್ 27ರಂದು ರಾತ್ರಿ 9.30ರ ವೇಳೆಗೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮವ ವಳಾಲು ಎಂಬಲ್ಲಿ ಬಜತ್ತೂರು ಗ್ರಾಮದ ಸೇಸಪ್ಪ ಗೌಡರವರ ಪುತ್ರ ಪದ್ಮನಾಭ ಗೌಡರವರು ಚಲಾಯಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿಗೆ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಗಣೇಶ ಎಂಬವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಬಳಿಕ ಆಗಿನ ಎಸ್.ಐ. ತಿಮ್ಮಪ್ಪ ನಾಯ್ಕರವರು ತನಿಖೆ ನಡೆಸಿ ಲಾರಿ ಚಾಲಕ ಪದ್ಮನಾಭ ಗೌಡರವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರು ಆರೋಪಿ ಲಾರಿ ಚಾಲಕ ಪದ್ಮನಾಭ ಗೌಡರವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿ ಪರ ನ್ಯಾಯವಾದಿಗಳಾದ ದೇವಾನಂದ ಕೆ. ಮತ್ತು ಕು.ಹರಿಣಿ ವಾದಿಸಿದ್ದರು.