ಪುತ್ತೂರು: ಮಾರಣಾಂತಿಕ ಹಲ್ಲೆಗೊಳಗಾಗಿ ಮೃತಪಟ್ಟ ಬಿಜೆಪಿ ಯುವ ಮೋರ್ಚ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮೃತ ದೇಹ ತೆಗೆಯ ಬೇಕಾದರೆ ಜಿಲ್ಲಾಧಿಕಾರಿ ಬರಬೇಕೆಂದು ಹಿಂದು ಕಾರ್ಯಕರ್ತರು ಆಸ್ಪತ್ರೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಬಂದ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆದಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿ ಯಾರೆ ಆರೋಪಿಗಳಾಗಿರಲಿ ಅವರನ್ನು ಪತ್ತೆ ಮಾಡಿ ಬಂಧಿಸುವ ಕೆಲಸ ಆಗಲಿದೆ. ಮೃತರ ಕುಟುಂಬಕ್ಕೆ ರೂ.1 ಕೋಟಿ ಪರಿಹಾರ ಮೊತ್ತಕ್ಕೆ ಸಂಬಂಧಿಸಿದ ಮನವಿಯನ್ನು ಪ್ರಾಮಾಣಿಕವಾಗಿ ಸರಕಾರಕ್ಕೆ ಸಲ್ಲಿಸುತ್ತೇನೆ. ಎಲ್ಲರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ವಿನಂತಿಸಿದರು.
Home ಚಿತ್ರ ವರದಿ ಪುತ್ತೂರು ಆಸ್ಪತ್ರೆಯಲ್ಲಿ ಪ್ರವೀಣ್ ಮೃತದೇಹವಿಟ್ಟು ಪ್ರತಿಭಟನೆ – ಜಿಲ್ಲಾಧಿಕಾರಿ ಆಗಮನದ ಬಳಿಕ ಪ್ರತಿಭಟನೆ ಹಿಂತೆಗೆತ