ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ: ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿ
ಪುತ್ತೂರು: ಬೆಳ್ಳಾರೆಯಲ್ಲಿ ಜು.26ರಂದು ರಾತ್ರಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರ ಹತ್ಯೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಪುತ್ತೂರಿನಲ್ಲಿ 144ರ ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಪ್ರವೀಣ್ ನೆಟ್ಟಾರುರವರ ಮೃತದೇಹವು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದ್ದು ಪುತ್ತೂರಿನಲ್ಲಿ ಉದ್ಧಿಗ್ನ ವಾತಾವರಣ ಇರುವ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು (ಜು.27) ಬೆಳಿಗ್ಗೆ ಸೆಕ್ಷನ್ 144 ರನ್ವಯ..ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ರವರು ಧ್ವನಿವರ್ಧಕದ ಮೂಲಕ ಈ ವಿಚಾರವನ್ನು ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.
Copy and paste this URL into your WordPress site to embed
Copy and paste this code into your site to embed