ಪುತ್ತೂರು: ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಹೊರಟಿತು.
ಪುಷ್ಪಾಲಂಕೃತ ಆಂಬುಲೆನ್ಸ್ನಲ್ಲಿ ಪ್ರವೀಣ್ ನೆಟ್ಟಾರು ಅವರ ಮೃತದೇಹ ಸಾಗುತ್ತಿದ್ದರೆ, ಹಿಂಬದಿಯಿಂದ ಸಂಘಟನೆ ವತಿಯಿಂದ ಕೊಡುಗೆಯಾಗಿ ನೀಡಿದ ಇನ್ನೆರಡು ಆಂಬುಲೆನ್ಸ್ಗಳು ಹಿಂಬಾಲಿಸಿದವು. ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರು ಶವಯಾತ್ರೆಯ ಜೊತೆಗೆ ಪಾದಯಾತ್ರೆಯಲ್ಲಿ ಸಾಗಿದರು.
ದರ್ಬೆ ವೃತ್ತದ ಬಳಿ ಅಂತಿಮ ದರ್ಶನ: ದರ್ಬೆ ವೃತ್ತದ ಬಳಿ ಸಾವಿರಾರು ಮಂದಿ ಮೃತದೇಹದ ಅಂತಿಮ ದರ್ಶನ ಪಡೆದರು. ಬಳಿಕ ಸವಣೂರು-ಪೆರುವಾಜೆ ಮಾರ್ಗವಾಗಿ ಬೆಳ್ಳಾರೆಗೆ ಬೀಳ್ಕೊಡಲಾಯಿತು.