ನೆಲ್ಯಾಡಿ: ಲಯನ್ಸ್ ಕ್ಲಬ್ ಆಲಂಕಾರು ದುರ್ಗಂಬಾ ಇದರ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಿವೃತ್ತ ಸೈನಿಕ ಕೆ.ಬಾಲಕೃಷ್ಣ ಶೆಟ್ಟಿಯವರನ್ನು ಆಲಂಕಾರು ದುರ್ಗಾಂಬಾ ವಿದ್ಯಾಸಂಸ್ಥೆಯಲ್ಲಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾದ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಸದಸ್ಯರಾದ ಪ್ರಶಾಂತ್ ರೈ, ವಿಜಯ ಕುಮಾರ್ ರೈ, ಪದ್ಮಪ್ಪ ಗೌಡ, ಲಕ್ಷ್ಮೀನಾರಾಯಣ ಪ್ರಭು, ಶ್ರೀಪತಿ ರಾವ್, ಪ್ರತಾಪ್ಚಂದ್ರ ರೈ ಕುದ್ಮಾರು ಗುತ್ತು, ಸುಭಾಸ್ ರೈ ಅರುವಾರ, ಸುಧಾಕರ್ ರೈ, ವಾಣಿ ಸುಂದರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.