ಬೆಳ್ಳಾರೆಯಲ್ಲಿ ಜನಪ್ರತಿನಿಧಿಗಳಿಗೆ ದಿಗ್ಬಂಧನ, ಕಲ್ಲು ತೂರಾಟ-ಲಾಠೀಜಾರ್ಜ್, ಓರ್ವನಿಗೆ ಗಾಯ

0

ಪುತ್ತೂರು: ಬೆಳ್ಳಾರೆಯಲ್ಲಿ ನಡೆಯುತ್ತಿರುವ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ.‌ ಸಂಸದರಾದ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ಅವರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಕಾರನ್ನು ಸುತ್ತುವರಿದು ಗುದ್ದಿದ ಕಾರ್ಯಕರ್ತರು ದಿಗ್ಬಂಧನ ವಿಧಿಸಿದ್ದಾರೆ. ಈ ವೇಳೆ ಮಸೀದಿಗೂ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡಿದ್ದು ಓರ್ವ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here