ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ವಿಚಾರ ತಿಳಿದು ಬಹಳ ನೋವುಂಟಾಗಿದೆ. ನಿರಂತರ ನಡೆಯುತ್ತಲೇ ಇರುವ ಇಂತಹ ಸಮಾಜಘಾತುಕ ಕೃತ್ಯಗಳನ್ನು ಖಂಡಿಸುತ್ತೇವೆ. ಸರಕಾರ ಕೂಡಲೇ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ ಮುಂದೆ ಇಂತಹ ಕೃತ್ಯ ನಡೆಯದಂತೆ ಕಾನೂನು ಇನ್ನಷ್ಟು ಬಲಗೊಳಿಸಬೇಕು. ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯ ದೇವರು ಕರುಣಿಸಲಿ ಎಂದು ಸಂಪ್ರಾರ್ಥಿಸುತ್ತೇವೆ. – ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್