ದ.ಕ.ಜಿಲ್ಲಾ ಬಿಜೆಪಿ ಯುವಮುಂದಾಳು‌ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ;ಸುಳ್ಯದಲ್ಲಿ‌ ಮೊಕ್ಕಾಂ ಹೂಡಲಿರುವ ಖಡಕ್ ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್

0

ಪುತ್ತೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಛಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಎರಡು ದಿನ ಮೊಕ್ಕಾಂ ಹೂಡಲಿದ್ದಾರೆ. ಖಡಕ್ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಈಗಾಗಲೇ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮತ್ತು ದಕ್ಷಿಣ ಕನ್ನಡ ಎಸ್.ಪಿ. ಹೃಷಿಕೇಶ್ ಸೋನಾವಣೆಯವರಿಂದ ಮಾಹಿತಿ ಪಡೆದಿದ್ದಾರೆ. ಅಹಿತಕರ ಘಟನೆ ನಡೆದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು ನಂತರ ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here