ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜುಲೈ 29ರಂದು ಬೆಳ್ಳಾರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ರ ಪ್ರವೀಣ್ ಅವರನ್ನು ಕಳೆದುಕೊಂಡ ಶೋಕದಲ್ಲಿದ್ದ ಪ್ರವೀಣ್ ತಂದೆ ಶೇಖರ್ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ, ಅಸ್ವಸ್ಥಗೊಂಡಿದ್ದರು. ತಕ್ಷಣ ಆಂಬುಲೆನ್ಸ್ನಲ್ಲಿ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.