ಪ್ರವೀಣ್ ನೆಟ್ಟಾರು ಮನೆಗೆ ವಿಜಯೇಂದ್ರ, ಕೆ.ಜಿ.ಬೋಪಯ್ಯ ಭೇಟಿ

0

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಬಿ.ವೈ. ಮತ್ತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿದರು.

ಪ್ರವೀಣ್ ಅವರ ಪತ್ನಿ ನೂತನಾ ಹಾಗೂ ಮನೆಯವರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದರು. ಸಚಿವ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here