ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೋಡಿಂಬಾಡಿ ಗ್ರಾ.ಪಂ.ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಪೂಜಾರಿಯವರಿಂದ ಮಹಿಳಾ ಮೋರ್ಛಾ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ

0


ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಪೂಜಾರಿ ಕೋರ್ಯರವರು ಮಹಿಳಾ ಮೋರ್ಛಾದ ಉಪಾಧ್ಯಕ್ಷೆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಮಹಿಳಾ ಮೋರ್ಛಾ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭಾ ಮತ್ತು ಲೋಕಸಭೆ ಹಾಗೂ ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದು ನನಗೆ ನೀಡಿರುವ ಜವಾಬ್ದಾರಿಗೆ ನ್ಯಾಯ ಒದಗಿಸಿ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸುವಲ್ಲಿ ಶ್ರಮ ಪಟ್ಟಿದ್ದೇನೆ. ಹಿಂದುತ್ವವೇ ಧ್ಯೇಯವಾಕ್ಯವೆಂಬ ನಿಟ್ಟಿನಲ್ಲಿ ಮತಯಾಚಿಸಿ ಪ್ರಸ್ತುತ ಅಧಿಕಾರಕ್ಕೆ ಬಂದ ಮೇಲೆ ಹಿಂದುಗಳಿಗೆ ರಕ್ಷಣೆ ಮತ್ತು ಹಿಂದುಗಳ ಸಾವಿಗೆ ನ್ಯಾಯ ನೀಡಲಾಗದೇ ಕಠಿಣ ಕ್ರಮ ಎಂಬುದು ಕೇವಲ ಭರವಸೆಯಾಗಿಯೇ ಉಳಿದಿರುವ ಕಾರಣ ಈ ಜವಾಬ್ದಾರಿಯಲ್ಲಿ ಮುಂದುವರೆಯುವುದು ಉಚಿತವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿ ಬೇಸರದಿಂದ ನನ್ನ ಮಹಿಳಾ ಮೋರ್ಛಾದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಈ ತನಕ ಪಕ್ಷ ನನಗೆ ನೀಡಿದ ಜವಾಬ್ದಾರಿಗೆ ಚಿರಋಣಿಯಾಗಿರುತ್ತೇನೆ ಎಂದು ಉಷಾ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here