ನೂಜಿಬಾಳ್ತಿಲ: ತೋಟಕ್ಕೆ ನುಗ್ಗಿದ ಕಾಡಾನೆ ಹಿಂಡು-ಅಡಿಕೆ ಮರ, ಜೇನು ಕೃಷಿ, ಸ್ಕೂಟರ್ ಗೆ ಹಾನಿ

0

ಕಡಬ: ಕಾಡಾನೆ ಹಿಂಡೊಂದು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ಜೇನು ಕೃಷಿಯ ಜೊತೆ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಹಾನಿ ಮಾಡಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ.


ಅಡೆಂಜ ನಿವಾಸಿ ಲಕ್ಷ್ಮಣ ಪೆತ್ತಲ ಹಾಗೂ ಸುಂದರ ಪೆತ್ತಲ ಎಂಬವರಿಗೆ ಸೇರಿದ 25 ಕ್ಕೂ ಹೆಚ್ಚಿನ ಅಡಿಕೆ ಗಿಡ, ಜಯಪ್ರಕಾಶ್ ಪೆತ್ತಲ ಎಂಬವರಿಗೆ ಸೇರಿದ 14 ಜೇನು ಪೆಟ್ಟಿಗೆ ಹಾಗೂ ಕಿಶೋರ್ ಪಾದೆ ಎಂಬವರಿಗೆ ಸೇರಿದ ಸ್ಕೂಟರನ್ನು ಕಾಡಾನೆ ಹಿಂಡು ಹಾನಿಗೊಳಿಸಿದೆ. ಕಾಡಾನೆ ದಾಳಿಯಿಂದಾಗಿ ಪರಿಸರದ ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

LEAVE A REPLY

Please enter your comment!
Please enter your name here