ದ.ಕ.ಜಿಲ್ಲೆ ಪ್ರವೇಶಕ್ಕೆ ಮುತಾಲಿಕ್‌ಗೆ ನಿಷೇಧ ಹಿನ್ನಲೆ; ಪ್ರಮೋದ್ ಮುತಾಲಿಕ್ ಹೆಜಮಾಡಿಯಲ್ಲಿ ಪೊಲೀಸ್ ವಶಕ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಪ್ರಯತ್ನಿಸಿದ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮೋದ್ ಮುತಾಲಿಕ್‌ರವರು ಬೆಳ್ಳಾರೆ ಮತ್ತು ಮೃತ ಪ್ರವೀಣ್ ಮನೆ ಹಾಗೂ ಇತರ ಕಡೆಗಳಿಗೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರಿಗೆ ಆಗಮಿಸುತ್ತಿದ್ದರು. ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಮತ್ತೆ ಉಡುಪಿ ಜಿಲ್ಲೆಗೆ ಬಿಟ್ಟು ಬರಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಪುತ್ತೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿಷೇಧ ವಿಧಿಸಿ ಆದೇಶ ಹೊರಡಿಸಿದ್ದ ಹಿನ್ನಲೆಯಲ್ಲಿ ಮುತಾಲಿಕ್‌ರವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here