ಕಾಣಿಯೂರು: ಕುಡಿಪ್ಪಾಡಿ ಸ. ಉ. ಹಿ ಪ್ರಾ. ಶಾಲೆಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಜು 25ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕಾ ಎಚ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ಶಿಕ್ಷಕಿ ವೀಣಾಲತಾ ಅವರ ಪುತ್ರಿ. ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಶಾಲ್ಮಿಕಾ ಜೈನ್ ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್, ಜಯಚಂದ್ರ, ವನಿತಾ ಸಹಕರಿಸಿದ್ದಾರೆ. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಲು, ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.