ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಅದ್ವಿಕ್ ರೈ ಕರಾಟೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಕಾಣಿಯೂರು: ಪುತ್ತೂರು ಸಂತ ವಿಕ್ಟರ್ ಬಾಲಕ ಪ್ರೌಢ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ under -17 ಬಾಲಕರ ಕರಾಟೆ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅದ್ವಿತ್ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಎಣ್ಮೂರು ಬಾಲಕೃಷ್ಣ ರೈ ಮತ್ತು ನಳಿನಿ ರೈ ಅವರ ಪುತ್ರ. ಇವರಿಗೆ ಕರಾಟೆ ಶಿಕ್ಷಕ ದಿನೇಶ್ ಮುರುಳ್ಯ ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್, ಜಯಚಂದ್ರ, ವನಿತಾ ಸಹಕರಿಸಿದ್ದಾರೆ. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಲು, ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಮುಖ್ಯಗುರು ಸರಸ್ವತಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here